ದಕ್ಷಿಣ ಕನ್ನಡ ಜಿಲ್ಲೆಯ 5 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ - Mahanayaka

ದಕ್ಷಿಣ ಕನ್ನಡ ಜಿಲ್ಲೆಯ 5 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

congress
25/03/2023

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ಮೊದಲ ಹಂತದ ಪಟ್ಟಿಯಲ್ಲಿ  ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ಬೆಳ್ತಂಗಡಿಗೆ ರಕ್ಷಿತ್ ಶಿವರಾಮ್, ಮೂಡಬಿದಿರೆಗೆ ಮಿಥುನ್ ಎಮ್. ರೈ, ಮಂಗಳೂರಿಗೆ ಯು.ಟಿ. ಖಾದರ್, ಬಂಟ್ವಾಳಕ್ಕೆ ರಮನಾಥ್ ರೈ .ಬಿ, ಸುಳ್ಯ- ಎಸ್​ಸಿ- ಕೃಷ್ಣಪ್ಪ ಜಿ. ಹೆಸರನ್ನು ಅಂತಿಮಗೊಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ