7:10 PM Tuesday 8 - September 2026

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್:  ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಸಾವು

bangalore
03/06/2022

ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಪಾದಚಾರಿ ಸಾವನ್ನಪ್ಪಿದ ಘಟನೆ ಆಡುಗೋಡಿ ಜಂಕ್ಷನ್ ಯುಕೋ ಬ್ಯಾಂಕ್ ಬಳಿ ನಡೆದಿದೆ.

ಮೃತ ವ್ಯಕ್ತಿ 34 ವರ್ಷದ ಪಶ್ಚಿಮ ಬಂಗಾಳ ಮೂಲದ ಬಿಕ್ಕಿ ಮೊಹಾಲಿ ಸಾವನ್ನಪ್ಪಿದ ಪಾದಚಾರಿ ಎಂದು ಗುರುತಿಸಲಾಗಿದೆ.

ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು,ಆಡುಗೋಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇನ್ನೂ ಅಪಘಾತ ಎಸಗಿ ವಾಹನದ ಚಾಲಕ ಎಸ್ಕೇಪ್ ಆಗಿದ್ದು, ಯಾವ ವಾಹನ ಆಕ್ಸಿಡೆಂಟ್ ಮಾಡಿದೆ ಎಂದು ಪೊಲೀಸರು ಪತ್ತೆ ಮಾಡುತ್ತಿದ್ದಾರೆ. ಅಪಘಾತ ಉಂಟಾದ ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಆಡುಗೋಡಿ ಸಂಚಾರಿ ಪೊಲೀಸ್ ಪ್ರಕರಣ ದಾಖಲು ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 7 ಮಂದಿ ಸಜೀವ ದಹನ

ಮಸೀದಿ ವಿವಾದ: ಜೂನ್ 4ರಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ

ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಹಿಂದುತ್ವ ಹೋರಾಟಗಾರರಿಗೆ ಮೋಹನ್ ಭಾಗವತ್ ತಿರುಗೇಟು

ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಡಾ.ಕೆ.ಟಿ.ಜಲೀಲ್

ಇತ್ತೀಚಿನ ಸುದ್ದಿ

mobil chat sitesi
Exit mobile version