ಈ ಸಹಾಯಧನಕ್ಕಾಗಿ ಅರ್ಹರು ಅರ್ಜಿ ಸಲ್ಲಿಸಿ
ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020-21ನೇ ಸಾಲಿನ ಸಾಮಾನ್ಯ ವರ್ಗ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆ ಅಡಿ ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಪ್ರಕಾರಗಳಿಗೆ ಅರ್ಹ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಹಾಗೂ ಅಸಂಘಟಿತ ಕಲಾವಿದರಿಗೆ ಸಂಘ-ಸಂಸ್ಥೆಗಳ ದನಸಹಾಯ, ವಾದ್ಯ ಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ಸೇವಾ ಸಿಂಧು ಪೋರ್ಟಾಲ್ sevashindhu.karnataka.gov.in ರ ಮೂಲಕ ದಿ: 27.12.2020 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-223354, 080-22230282/ 22279954ಗಳನ್ನು ಅಥವಾ ಇಲಾಖಾ ವೆಬ್ಸೈಟ್ www.kannadasiri.karnataka.gov.in ನ್ನು ಸಂಪರ್ಕಿಸುವುದು.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.