ಶರಣು: ತಿಹಾರ್ ಜೈಲಲ್ಲಿ ಶರಣಾಗಲು ದೆಹಲಿ ಸಿಎಂ ಕೇಜ್ರಿವಾಲ್ ರೆಡಿ..? - Mahanayaka
10:52 AM Saturday 7 - February 2026

ಶರಣು: ತಿಹಾರ್ ಜೈಲಲ್ಲಿ ಶರಣಾಗಲು ದೆಹಲಿ ಸಿಎಂ ಕೇಜ್ರಿವಾಲ್ ರೆಡಿ..?

02/06/2024

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿಗೆ ಮರಳಲು ಸಜ್ಜಾಗಿದ್ದಾರೆ. ದೆಹಲಿ ಸಿಎಂ ಅವರ ಮಧ್ಯಂತರ ಜಾಮೀನು ಅರ್ಜಿಗೆ ದೆಹಲಿ ನ್ಯಾಯಾಲಯ ತಕ್ಷಣದ ಪರಿಹಾರವನ್ನು ನಿರಾಕರಿಸಿದೆ. ನ್ಯಾಯಾಲಯವು ಅರ್ಜಿಯ ಮೇಲಿನ ನಿರ್ಧಾರವನ್ನು ಜೂನ್ 5 ಕ್ಕೆ ಮುಂದೂಡಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರಕ್ಕಾಗಿ ನ್ಯಾಯಾಲಯ ನೀಡಿದ ಮಧ್ಯಂತರ ಜಾಮೀನು ಮುಗಿದ ನಂತರ ಶರಣಾಗಲು ರೆಡಿಯಾಗಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ಇದನ್ನು ದೇಶದ ಮುಂದೆ ಒಪ್ಪಿಕೊಂಡಿದ್ದಾರೆ ಮತ್ತು ನನ್ನ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

“ನಾನು ಮತ್ತೆ ಜೈಲಿಗೆ ಹೋಗುತ್ತಿದ್ದೇನೆ ಎಂದು ದೆಹಲಿಯ ಜನರಿಗೆ ಹೇಳಲು ಬಯಸುತ್ತೇನೆ, ನಾನು ಹಗರಣ ಮಾಡಿದ್ದಕ್ಕಾಗಿ ಅಲ್ಲ, ಆದರೆ ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದೇನೆ… ನನ್ನ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಪ್ರಧಾನಿ ಮೋದಿ ದೇಶದ ಮುಂದೆ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಿದ್ದಂತೆ ರಾಜ್ ಘಾಟ್ ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ