1:40 PM Saturday 7 - February 2026

‘ಕಮಲ’ ಅಪ್ಪುಗೆ: ನಿನ್ನೆ ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರ್ಪಡೆ

13/02/2024

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದ ಒಂದು ದಿನದ ನಂತರ ಇಂದು ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಚವಾಣ್ ಪಕ್ಷಕ್ಕೆ ಸೇರಲಿದ್ದಾರೆ. ಚವಾಣ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಕಾಂಗ್ರೆಸ್ ಮತ್ತು ಶಾಸಕ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ತಮ್ಮ ಪ್ರಾಥಮಿಕ ಸದಸ್ಯತ್ವದ ರಾಜೀನಾಮೆ ಪತ್ರವನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಕಳುಹಿಸಿದ್ದಾರೆ.

ರಾಜೀನಾಮೆ ನೀಡಿದ ನಂತರ, ಚವಾಣ್ ಅವರು ‘ಬಿಜೆಪಿಗೆ ಸೇರಲು ಇನ್ನೂ ನಿರ್ಧರಿಸಿಲ್ಲ’ ಎಂದು ಹೇಳಿದ್ದರು.
ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಗೃಹ ಸಚಿವ ಎಸ್.ಬಿ.ಚವಾಣ್ ಅವರ ಪುತ್ರ ಚವಾಣ್ ಅವರ ನಿರ್ಗಮನವು ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕಿ ಮತ್ತು ಮಿಲಿಂದ್ ದಿಯೋರಾ ಅವರ ರಾಜೀನಾಮೆ ನಂತರ ರಾಜ್ಯದಲ್ಲಿ ಪಕ್ಷದ ಸವಾಲುಗಳನ್ನು ತೀವ್ರಗೊಳಿಸಿದೆ.

ಇತ್ತೀಚಿನ ಸುದ್ದಿ

Exit mobile version