ವಿಧಾನಸಭಾ ಚುನಾವಣಾ ಅಭ್ಯರ್ಥಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯ ಸಂಗ್ರಹಣಾ ಮತದಾನದ ವರದಿ ಹಸ್ತಾಂತರ - Mahanayaka
2:21 PM Friday 11 - September 2026

ವಿಧಾನಸಭಾ ಚುನಾವಣಾ ಅಭ್ಯರ್ಥಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯ ಸಂಗ್ರಹಣಾ ಮತದಾನದ ವರದಿ ಹಸ್ತಾಂತರ

udupi
01/04/2023

ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಮಾ.31ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳು ಹಾಗೂ ಇತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು (ಪೋಲಿಂಗ್ ರಿಪೋರ್ಟ್) ಬಿಜೆಪಿ ರಾಜ್ಯ ತಂಡ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಹಸ್ತಾಂತರಿಸಿತು.

ಈ ಸಂದರ್ಭದಲ್ಲಿ ರಾಜ್ಯ ತಂಡದ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti