ತಿರುಪತಿಯಲ್ಲಿ ಟೋಕನ್ ವಿತರಣೆ ವೇಳೆ ಕಾಲ್ತುಳಿತ: 6 ಮಂದಿ ಬಲಿ - Mahanayaka
12:58 AM Saturday 18 - January 2025

ತಿರುಪತಿಯಲ್ಲಿ ಟೋಕನ್ ವಿತರಣೆ ವೇಳೆ ಕಾಲ್ತುಳಿತ: 6 ಮಂದಿ ಬಲಿ

09/01/2025

ತಿರುಮಲ ಬೆಟ್ಟದ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಕಾಲ್ತುಳಿತದಲ್ಲಿ ಕನಿಷ್ಠ ಆರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವೈಕುಂಠ ದ್ವಾರ ಸರ್ವದರ್ಶನಂಗಾಗಿ ಟೋಕನ್ ಗಳಿಗಾಗಿ ಕಾಯುತ್ತಿದ್ದ ಜನಸಮೂಹವು ನಿಯಂತ್ರಣ ಮೀರಿ ಹೋಗಿದ್ದರಿಂದ ಗೊಂದಲ ಭುಗಿಲೆದ್ದಿತು.

ವಾರ್ಷಿಕ ವೈಕುಂಠ ದ್ವಾರ ದರ್ಶನಂ (ಜನವರಿ 10 ರ ಶುಕ್ರವಾರದಿಂದ ಪ್ರಾರಂಭವಾಗಲಿರುವ ವಿಶೇಷ 10 ದಿನಗಳ ದರ್ಶನ) ಟಿಕೆಟ್ ಗಳಿಗಾಗಿ ದೇಶಾದ್ಯಂತ ಸಾವಿರಾರು ಮಂದಿ ಭಕ್ತರು ಜಮಾಯಿಸಿದ್ದರು.
ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.


ADS

“ತಿರುಮಲ ಶ್ರೀವಾರಿ ವೈಕುಂಠ ದ್ವಾರಕ್ಕೆ ಭೇಟಿ ನೀಡಲು ಟೋಕನ್ ಪಡೆಯಲು ತಿರುಪತಿಯ ವಿಷ್ಣು ನಿವಾಸಂ ಬಳಿ ಕಾಲ್ತುಳಿತದಲ್ಲಿ ಹಲವಾರು ಭಕ್ತರು ಸಾವನ್ನಪ್ಪಿರುವುದು ನನಗೆ ತೀವ್ರ ದುಃಖ ತಂದಿದೆ. ಟೋಕನ್ ಗಳಿಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಸಮಯದಲ್ಲಿ ನಡೆದ ಈ ದುರಂತ ಘಟನೆ ನನ್ನನ್ನು ತೀವ್ರವಾಗಿ ಕಾಡಿತು” ಎಂದು ನಾಯ್ಡು ಸಂತಾಪ ಸೂಚಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ