ಭಾರೀ ಮಳೆಯಿಂದಾಗಿ ಅಯೋಧ್ಯೆ ರಾಮ ಮಂದಿರದ ಮೇಲ್ಛಾವಣಿ ಸೋರುತ್ತಿದೆ: ಅರ್ಚಕರ ಆರೋಪ

25/06/2024

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ದೇಗುಲದ ಗರ್ಭಗುಡಿಯನ್ನು ಸಾರ್ವಜನಿಕರಿಗೆ ತೆರೆದ ನಂತರ ಮೊದಲ ಭಾರಿ ಮಳೆಯ ನಂತರ ಗರ್ಭಗುಡಿಯ ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಆರೋಪಿಸಿದ್ದಾರೆ.
ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯವಿದೆ ಎಂದು ಆರೋಪಿಸಿದ ದಾಸ್, ಶನಿವಾರ ಮಧ್ಯರಾತ್ರಿಯ ಮಳೆಯ ನಂತರ ದೇವಾಲಯದ ಆವರಣದಿಂದ ಮಳೆನೀರನ್ನು ಹೊರಹಾಕಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಅಗತ್ಯ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೇವಾಲಯದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಮೇಲ್ಛಾವಣಿಯಿಂದ ನೀರು ಸೋರಿಕೆಯಾದ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ, ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇವಾಲಯಕ್ಕೆ ತಲುಪಿ ಛಾವಣಿಯನ್ನು ದುರಸ್ತಿ ಮಾಡಲು ಮತ್ತು ಅವುಗಳನ್ನು ಜಲನಿರೋಧಕವಾಗಿಸಲು ಸೂಚನೆಗಳನ್ನು ನೀಡಿದರು ಎಂದು ದೇವಾಲಯದ ಟ್ರಸ್ಟ್ ಮೂಲಗಳು ತಿಳಿಸಿವೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version