ಬಸ್ ನಿಂದ ಬಿದ್ದು ಕಂಡೆಕ್ಟರ್ ಮೃತಪಟ್ಟ ಹಿನ್ನೆಲೆ: ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ - Mahanayaka
12:30 PM Sunday 16 - November 2025

ಬಸ್ ನಿಂದ ಬಿದ್ದು ಕಂಡೆಕ್ಟರ್ ಮೃತಪಟ್ಟ ಹಿನ್ನೆಲೆ: ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ

dakshina kannada
02/09/2023

ಮೊನ್ನೆ ಮಂಗಳೂರಲ್ಲಿ ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡೆಕ್ಟರ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು.

ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಹಾಕರಿಗೆ ನೀಡಿ ಮನವರಿಕೆ ಮಾಡಲಾಯಿತು.
ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್ಬೋರ್ಡ್ನಲ್ಲಿ ನಿಲ್ಲುವಂತಿಲ್ಲ. ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು.
ಚಲೋ ಕಾರ್ಡ್ಗಳನ್ನು ತಿರಸ್ಕರಿಸುವಂತಿಲ್ಲ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕರ್ಕಶ ಹಾರ್ನ್ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ನೀಡಲಾಯಿತು.

ಇತ್ತೀಚಿನ ಸುದ್ದಿ