ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ: ಹವಾಮಾನ ಇಲಾಖೆ ಮುನ್ಸೂಚನೆ

asani
19/03/2022

ಟುಟಿಕೋರಿನ್: ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ಮಾ. 21ಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ. ‘ಅಸನಿ’ ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್‌ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವಾಗಿ ಸಾಗಲಿದ್ದು, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಉತ್ತರ ಕರಾವಳಿಯತ್ತ ಬರುತ್ತೆ ಎಂದು ಸೂಚನೆ ಕೊಟ್ಟಿದೆ.

ಈ ಹಿನ್ನೆಲೆ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಮೀನುಗಾರರು ಮಾ. 20 ರಿಂದ ಮೂರು ದಿನಗಳ ಕಾಲ ಮೀನುಗಾರಿಕೆ ಮಾಡಬಾರದು ಎಂದು ಎಚ್ಚರಿಕೆ ಕೊಟ್ಟಿದೆ. ಅದರಲ್ಲಿಯೂ ಅಂಡಮಾನ್ ಮತ್ತು ನಿಕೋಬರ್ ದ್ವೀಪದ ತೀರ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಘೋಷಣೆ ಮಾಡಬೇಕು. ಆಯಕಟ್ಟಿನ ಪ್ರದೇಶದಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಬೇಕು ಎಂದು ಸಂಸದ ಕುಲದೀಪ್ ರೈ ಅಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ: ಹವಾಮಾನ ಇಲಾಖೆ ಮುನ್ಸೂಚನೆ

ಸಿನಿಮಾದಲ್ಲಿ ಗುಜರಾತ್, ಲಖಿಂಪುರ್ ಘಟನೆಯನ್ನೂ ತೋರಿಸಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿ, ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬಿಜೆಪಿ, ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಇತ್ತೀಚಿನ ಸುದ್ದಿ

mobil chat sitesi
Exit mobile version