6:23 PM Friday 11 - September 2026

ಬಾಂಗ್ಲಾದೇಶದಲ್ಲಿ ಮೀಸಲಾತಿ ಪ್ರತಿಭಟನೆ: ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ ಪ್ರಧಾನಿ ಹಸೀನಾ

20/07/2024

ಸರ್ಕಾರಿ ಉದ್ಯೋಗಗಳ ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಭೀಕರ ಘರ್ಷಣೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಿಸಿದ್ದಾರೆ. ದೇಶಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ವರದಿಗಳ ಪ್ರಕಾರ, ಈ ವಾರ ರಕ್ತಸಿಕ್ತ ತಿರುವು ಪಡೆದ ಪ್ರತಿಭಟನೆಯಲ್ಲಿ ಈವರೆಗೆ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ. 1,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆಯ ವೇಳೆಗೆ, 125 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 245 ಭಾರತೀಯರು ಭಾರತಕ್ಕೆ ಮರಳಿದ್ದಾರೆ.

ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶದ 1971 ರ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ 30% ವರೆಗೆ ಹಂಚಿಕೆ ಮಾಡುವ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ಅವರು ಕರೆ ನೀಡಿದ್ದಾರೆ.

204 ಭಾರತೀಯರು, 158 ನೇಪಾಳಿಗಳು ಮತ್ತು ಭೂತಾನ್ ನ ಒಬ್ಬ ವ್ಯಕ್ತಿ ಸೇರಿದಂತೆ 363 ವ್ಯಕ್ತಿಗಳು ದವ್ಕಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಮೂಲಕ ಮೇಘಾಲಯವನ್ನು ಪ್ರವೇಶಿಸಿದ್ದಾರೆ ಎಂದು ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವರದಿ ಮಾಡಿದ್ದಾರೆ. ರಾಜ್ಯದಲ್ಲಿ ಆಶ್ರಯ ಪಡೆದವರ ಒಟ್ಟು ಸಂಖ್ಯೆ 670 ಕ್ಕೂ ಹೆಚ್ಚಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler
Exit mobile version