ದಲಿತ ಯುವಕನ ಗುಪ್ತಾಂಗಕ್ಕೆ ಒದ್ದು ಬರ್ಬರ ಹತ್ಯೆ!
ಯಾದಗಿರಿ: ದಲಿತ ಯುವಕನೋರ್ವನನ್ನು ಗುಪ್ತಾಂಗಕ್ಕೆ ಒದ್ದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಯಾದಗಿರಿ ನಗರದ ಶಹಾಪುರಪೇಟೆಯಲ್ಲಿ ನಡೆದಿದೆ.
ರಾಕೇಶ್ (22) ಹತ್ಯೆಗೀಡಾದ ಯುವಕನಾಗಿದ್ದು, ಫಯಾಝ್ ಹಾಗೂ ಆತನ ಸ್ನೇಹಿತರ ಜೊತೆಗೆ ಜಗಳ ನಡೆದ ನಂತರ ಯುವಕನ ಗುಪ್ತಾಂಗಕ್ಕೆ ಒದ್ದು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.
ನಿನ್ನೆ ರಾತ್ರಿ ರೊಟ್ಟಿ ಕೇಂದ್ರಕ್ಕೆ ರೊಟ್ಟಿ ತರಲೆಂದು ರಾಕೇಶ್ ತೆರಳಿದ್ದ. ಈ ವೇಳೆ ರೊಟ್ಟಿ ಕೇಂದ್ರದ ಫಯಾಝ್ ಜೊತೆಗೆ ಜಗಳ ನಡೆದಿತ್ತು. ರಾಕೇಶ್ ಮನೆಗೆ ಮರಳಿದ ನಂತರ ಮತ್ತೆ ಜಗಳ ನಡೆದಿದ್ದು, ರಾಕೇಶ್ ನ ಗುಪ್ತಾಂಗಕ್ಕೆ ಒದ್ದು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೃತ ಯುವಕನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಯಾದಗಿರಿ ಎಸ್ ಪಿ ಸಂಗೀತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯ ನಂತರ ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth