ತಂದೆ-ತಾಯಿ ಬಳಿ ಜಗಳವಾಡಿದ ಸಹೋದರರು ಬಾವಿಗೆ ಹಾರಿ ಆತ್ಮಹತ್ಯೆ
ಕಲಬುರಗಿ: ಇಬ್ಬರು ಸಹೋದರರು ಪೋಷಕರೊಂದಿಗೆ ಜಗಳವಾಡಿ ಬಾವಿಗೆ ಹಾರ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ.
17 ವರ್ಷ ಪ್ರಾಯದ ಸುನೀಲ್ ಹಾಗೂ 12 ವರ್ಷದ ಶೇಖರ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಪೋಷಕರೊಂದಿಗೆ ಜಗಳವಾಡಿದ್ದು, ಇದೇ ಕಾರಣಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇವರಿಬ್ಬರಿಗೂ ಈಜು ಬರುತ್ತಿತ್ತು. ಈ ಕಾರಣಕ್ಕಾಗಿ ಅವರು ತಮ್ಮ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ತಂದೆ, ತಾಯಿಯ ಜೊತೆಗೆ ಜಗಳವಾಡಿದ ನಂತರ ನೇರವಾಗಿ ಹೊಲದಲ್ಲಿದ್ದ ಬಾವಿಯ ಬಳಿಗೆ ಬಂದ ಇವರಿಬ್ಬರು ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.