ಬೆದರಿಸಿ ಚಿನ್ನಾಭರಣ ಸುಳಿಗೆ | ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ದೂರು ನೀಡಿದ ನಿವೃತ್ತ ನೌಕರ - Mahanayaka

ಬೆದರಿಸಿ ಚಿನ್ನಾಭರಣ ಸುಳಿಗೆ | ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ದೂರು ನೀಡಿದ ನಿವೃತ್ತ ನೌಕರ

15/11/2020

ಹುಬ್ಬಳ್ಳಿ: ನಿವೃತ್ತ ನೌಕರರೊಬ್ಬರು ಪೊಲೀಸ್ ಅಧಿಕಾರಿಗಳು ತನಗೆ ಬೆದರಿಕೆಯೊಡ್ಡಿ, 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎಂದು 3ನೇ ಜೆಎಂಎಫ್​​ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ನವನಗರದ ನಿವಾಸಿ ಓಂಕಾರಗೌಡ ಪಾಟೀಲ ಎಂಬವರು ಈ ದೂರು ನೀಡಿದ್ದು, ಹಾಲಿ ಎಪಿಎಂಸಿ ಇನ್ಸಪೆಕ್ಟರ್ ಪ್ರಭು ಸೂರಿನ್ ಹಾಗೂ ಬೆಂಗಳೂರಿನ ಶಿವಲೀಲಾ ಪಾಟೀಲ್ ಹಾಗೂ ಸಂತೋಷಕುಮಾರ ಗುಡ್ಡಾಪುರಮಠ ಎಂಬವರು ತನ್ನ ಚಿನ್ನಾಭರಣವನ್ನು ಕಿತ್ತುಕೊಂಡಿರುವುದಾಗಿ ಅವರು ಆರೋಪಿಸಿದ್ದಾರೆ.

ಚಿನ್ನಾಭರಣ ಕಿತ್ತುಕೊಂಡ ಬಗ್ಗೆ ಪದೇ ಪದೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೂ ಪ್ರಕರಣವನ್ನ ದಾಖಲಿಸಿಕೊಂಡಿಲ್ಲವಂತೆ. ಹೀಗಾಗಿ ಓಂಕಾರಗೌಡ ಪಾಟೀಲ, 3ನೇ ಜೆಎಂಎಫ್ ​​ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದರೆ ಆರೋಪಿಯೇ ಇನ್ಸ್ ಪೆಕ್ಟರ್ ಆಗಿರುವ ಕಾರಣ ಹೇಗೆ ತನಿಖೆ ನಡೆಯುತ್ತದೆ ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ