12:49 PM Wednesday 9 - September 2026

ಪಶ್ಚಿಮ ಬಂಗಾಳ: ಬೆಳೆ ನಾಶ ಬೇಸತ್ತು ಮೂವರು ರೈತರ ಆತ್ಮಹತ್ಯೆ

farmer
19/12/2021

ಬರ್ಧಮಾನ್: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಮೂವರು ರೈತರು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.

ಜವಾದ್ ಚಂಡಮಾರುತದಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಆಲೂಗೆಡ್ಡೆ ಮತ್ತು ಭತ್ತದ ಬೆಳೆ ನಾಶವಾದ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತರ ಕುಟುಂಬಗಳು ಹೇಳಿದ್ದು, ಘಟನೆಗಳ ಬಗ್ಗೆ ಜಿಲ್ಲಾಡಳಿತ ತನಿಖೆ ನಡೆಸುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬರ್ಧಮಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಘಟನೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಿಯಾಂಕಾ ಸಿಂಗ್ಲಾ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’: ಉದ್ದವ್ ಠಾಕ್ರೆ

‘ವೀರ ಸಾವರ್ಕರ್’  ಪುಸ್ತಕ ಬಿಡುಗಡೆ: ಅಂಬೇಡ್ಕರ್ ಹಾಗೂ ಸಾವರ್ಕರ್ ನಡುವೆ ಉತ್ತಮ ಸಂಬಂಧವಿತ್ತು | ಬಿ.ಎಲ್.ಸಂತೋಷ್

ಕೊಲೆಗೆ ಕೊಲೆಯೇ ಉತ್ತರವಾಯ್ತು!: ಎಸ್ ಡಿಪಿಐ ಮುಖಂಡನ ಕೊಲೆ ನಡೆದು ಬೆಳಗಾಗುವಷ್ಟರಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಆಟೋ ಮೇಲೆ ಮಗುಚಿ ಬಿದ್ದ ಬೃಹತ್ ಕಂಟೈನರ್: ನಾಲ್ವರ ದಾರುಣ ಸಾವು

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version