ಬೆಳ್ತಂಗಡಿ: ಮಗುಚಿ ಬಿದ್ದ ಆಟೋ ರಿಕ್ಷಾ ಎಳೆಯ ಕಂದಮ್ಮ ದಾರುಣ ಸಾವು - Mahanayaka
8:21 AM Saturday 12 - September 2026

ಬೆಳ್ತಂಗಡಿ: ಮಗುಚಿ ಬಿದ್ದ ಆಟೋ ರಿಕ್ಷಾ ಎಳೆಯ ಕಂದಮ್ಮ ದಾರುಣ ಸಾವು

belthangady
31/01/2023

ಬೆಳ್ತಂಗಡಿ: ಮಾಲಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ಎಳೆಯ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ.

ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಗಳ ಒಂದು ವರ್ಷದ ಮಗುವೇ ಅಪಘಾತದಲ್ಲಿವಮೃತಪಟ್ಟ ಮಗುವಾಗಿದೆ. ಇವರು ಸಂಬಂಧಿಕರ ಮನೆಗೆಂದು ಬಂದವರಾಗಿದ್ದಾರೆ. ಕೊಲ್ಪೆದ ಬೈಲಿನಿಂದ ಗರ್ಡಾಡಿಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ  ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಅಪಘಾತದ ತೀವ್ರತೆಗೆ ಮಗು ತಾಯಿಯ ಕೈಯಿಂದ ರಸ್ತೆಗೆ ಎಸೆಯಲ್ಪಟ್ಟಿದೆ.

ರಿಕ್ಷಾದಲ್ಲಿದ್ದ  ಮಗುವಿನ ತಾಯಿ ಗೀತಾ ಹಾಗೂ ರತ್ನ ಎಂಬವರಿಗೆ ಗಾಯಗಳಾಗಿದೆ. ರಿಕ್ಷಾ ಚಾಲಕನಿಗೂ ಗಾಯಗಳಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಮಗುವಿಗೆ ಹೊರನೋಟಕ್ಕೆ ಯಾವುದೇ ಗಾಯಗಳಾಗಿರಲಿಲ್ಲ, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮಗು ಮೃತಪಟ್ಟಿತ್ತು  ಎನ್ನಲಾಗಿದೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler