ನೆಲ್ಯಾಡಿ: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ
ನೆಲ್ಯಾಡಿ: ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ನೆಲ್ಯಾಡಿ ನವೀನ್ ಇಂಟರ್ ಲಾಕ್ ಮಾಲಕ, ನೆಲ್ಯಾಡಿ ನಿವಾಸಿಯಾಗಿರುವ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್(21) ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದು, ಮಂಗಳೂರಿನ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನವ್ಯಾ ಆ ಬಳಿಕ ಮನೆಯಲ್ಲಿಯೇ ಇದ್ದರು.
ಇಂದು ಬೆಳಗ್ಗೆ 8 ಗಂಟೆಯಾದರೂ ನವ್ಯಾ ರೂಮ್ ನಿಂದ ಹೊರ ಬಂದಿರಲಿಲ್ಲ, ಈ ಸಂದರ್ಭ ಆಕೆಯ ತಾಯಿ ಮಗಳ ಮೊಬೈಲ್ ಗೆ ಕರೆ ಮಾಡಿದ್ದು, ಆದರೆ ಕರೆ ಸ್ವೀಕರಿಸಲಿಲ್ಲ. ಇದರಿಂದ ಅನುಮಾನಗೊಂಡ ನವ್ಯಾ ಅವರ ತಂದೆ ಜೋಸೆಫ್ ರವರು ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಮೃತ ನವ್ಯಾ ತಂದೆ ತಾಯಿ ಹಾಗೂ ಓರ್ವ ಸಹೋದರ ಹಾಗೂ ಓರ್ವಳು ಸಹೋದರಿಯನ್ನು ಅಗಲಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.