ರೈತ ಸಂಘಟನೆಗಳಿಂದ ಇಂದು ಭಾರತ್ ಬಂದ್ ಗೆ ಕರೆ: ಫಲ ನೀಡುತ್ತಾ ಮತ್ತೊಂದು ‌ಸುತ್ತಿನ ಮಾತುಕತೆ..?

16/02/2024

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವಾರು ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ‘ಭಾರತ್ ಬಂದ್’ ಗೆ ಕರೆ ನೀಡಿವೆ. ಸೆಕ್ಷನ್ 144 ವಿಧಿಸಿರುವುದರಿಂದ ದೆಹಲಿ ಮತ್ತು ಅದರ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ದೊಡ್ಡ ಕೂಟಗಳನ್ನು ನಿಷೇಧಿಸಲಾಗಿದೆ. ನೋಯ್ಡಾ ಮೂಲದ ಭಾರತೀಯ ಕಿಸಾನ್ ಪರಿಷತ್ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಬಲ ನೀಡುವುದರೊಂದಿಗೆ ರೈತರು ಆಂದೋಲನವನ್ನು ತೀವ್ರಗೊಳಿಸಲು ಪ್ರತಿಜ್ಞೆ ಮಾಡಿದೆ.

ಪ್ರತಿಭಟನಾ ನಿರತ ರೈತ ಸಂಘಗಳ ನಾಯಕರು ಮತ್ತು ಮೂವರು ಕೇಂದ್ರ ಸಚಿವರ ನಡುವಿನ ಐದು ಗಂಟೆಗಳ ಮ್ಯಾರಥಾನ್ ಮಾತುಕತೆಯಲ್ಲಿ ಯಾವುದೇ ಫಲಿತಾಂಶ ಕಂಡುಬಂದಿಲ್ಲ. ಮತ್ತೊಂದು ಸುತ್ತಿನ ಚರ್ಚೆಯನ್ನು ಭಾನುವಾರ (ಫೆಬ್ರವರಿ 18) ನಿಗದಿಪಡಿಸಲಾಗಿದೆ.
ಈಗಾಗಲೇ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾದ ‘ಭಾರತ್ ಬಂದ್’ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪ್ರತಿಭಟನಾ ನಿರತ ರೈತರು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಭಾರತದ ಪ್ರಮುಖ ರಸ್ತೆಗಳಲ್ಲಿ ಬೃಹತ್ ‘ಚಕ್ಕಾ ಜಾಮ್’ ನಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

Exit mobile version