ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು | ಶಾಸಕ ಪಿ.ಸಿ.ಜಾರ್ಜ್ ವಿವಾದಾತ್ಮಕ ಹೇಳಿಕೆ - Mahanayaka
6:08 PM Thursday 16 - October 2025

ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು | ಶಾಸಕ ಪಿ.ಸಿ.ಜಾರ್ಜ್ ವಿವಾದಾತ್ಮಕ ಹೇಳಿಕೆ

p c george
13/04/2021

ತಿರುವನಂತಪುರಂ: ಭಾರತವನ್ನು ಹಿಂದೂ ರಾಷ್ಟ್ರವಾಗಿ ಘೋಷಿಸಬೇಕು ಎಂದು  ಕೇರಳದ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜನಪಕ್ಷನ್ ಪಕ್ಷದ ಶಾಸಕ ಪಿ.ಸಿ.ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


Provided by

 ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದು, 2030 ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಸಲುವಾಗಿ ಕೇರಳದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿವೆ ಎಂದು ಆರೋಪಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2016 ರಲ್ಲಿ ನೋಟ್‌ ಬ್ಯಾನ್‌ ಮಾಡುವ ಮೂಲಕ ಹೊರ ದೇಶದವರ ದೇಣಿಗೆ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಯೋಜನೆಯನ್ನು ಇನ್ನಷ್ಟು ವಿಳಂಬಗೊಳಿಸಿದರು ಎಂದು ಅವರು ಹೇಳಿದರು.

ಇನ್ನು ಮುಸ್ಲಿಮರು ಫ್ರಾನ್ಸ್‌ನಂತಹ ಕ್ರೈಸ್ತ ರಾಷ್ಟ್ರಗಳನ್ನು ಅತಿಕ್ರಮಿಸುತ್ತಿದ್ದಾರೆ. ಆ ರಾಷ್ಟ್ರವನ್ನು ಇಸ್ಲಾಮಿಕ್ ರಾಷ್ಟ್ರಗಳಾಗಿ ಪರಿವರ್ತಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಲವ್ ಜಿಹಾದ್ ನಿಜ, ಕೇರಳದಲ್ಲಿ ಇದು ಅಸ್ತಿತ್ವದಲ್ಲಿದೆ. ಇಲ್ಲಿ ಮತಾಂತರ ಮಾಡುವ ಸಲುವಾಗಿಯೇ ಮೋಸದ ವಿವಾಹವಾಗುವ ಪ್ರಕರಣಗಳು ಹಲವು ನಡೆದಿದೆ ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಒನ್ ಮ್ಯಾನ್ ಆರ್ಮಿ ಎಂದೇ ಖ್ಯಾತಿ ಹೊಂದಿರುವ ಜಾರ್ಜ್ ಈ ಹಿಂದೆಯೂ ಹಲವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಚುನಾವಣೆಯ ಸಂದರ್ಭದಲ್ಲಿ ಮುಸ್ಲಿಮ್ ಮತಗಳು ತನಗೆ ಸಿಗುತ್ತಿಲ್ಲ ಎನ್ನುವ ಆಕ್ರೋಶಕ್ಕೆ ಈ ಹೇಳಿಕೆ ನೀಡಿದ್ದಾರೆ ಎನ್ನುವ ವಿಶ್ಲೇಷಣೆಗಳು ಕೇರಳದಲ್ಲಿ ಇದೀಗ ನಡೆಯುತ್ತಿದೆ.

ಇತ್ತೀಚಿನ ಸುದ್ದಿ