ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬೆಂಗಾವಲಿಗೆ ಗುಂಡಿನ ದಾಳಿ - Mahanayaka

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬೆಂಗಾವಲಿಗೆ ಗುಂಡಿನ ದಾಳಿ

26/10/2020

ಬುಲಂದರ್ ಶಹರ್: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲಿಗೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಸದರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಹಾಜಿ ಯಾಮಿನ್ ಪರ ಕ್ಯಾಂಪೇನ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಚಂದ್ರಶೇಖರ್ ಅಜಾದ್ ಅವರೇ ಟ್ವೀಟ್ ಮಾಡಿದ್ದಾರೆ.

ನಮ್ಮ ಅಭ್ಯರ್ಥಿಗಳು ಬುಲಂದರ್ ಶಹರ್ ನಲ್ಲಿ ಕಣಕ್ಕಿಳಿದಿರುವುದರಿಂದ ವಿರೋಧ ಪಕ್ಷಗಳು ಭಯಭೀತರಾಗಿದ್ದಾರೆ. ಇಂದಿನ ರ್ಯಾಲಿ ಅವರ ನಿದ್ದೆ ಕೆಡಿಸಿದೆ.  ಈ ಕಾರಣಕ್ಕಾಗಿ ನನ್ನ ಬೆಂಗಾವಲಿನ ಮೇಲೆ ಹೇಡಿಗಳಂತೆ ಗುಂಡಿನ ದಾಳಿ ನಡೆಸಲಾಗಿದೆ. ಇದು ಅವರ ಸೋಲಿನ ಹತಾಶೆಯನ್ನು ತೋರಿಸುತ್ತದೆ. ವಾತಾವರಣ ಯಾವಾಗಲೂ ಕೆಟ್ಟದಾಗಿಯೇ ಇರಬೇಕು ಎಂದು ಅವರು ಬಯಸುತ್ತಾರೆ ಆದರೆ, ನಾವು ಅದನ್ನು ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಈ ಘಟನೆಯ  ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್, ಈ ಘಟನೆ ನಡೆದಿರುವುದು ದೃಢಪಟ್ಟಿಲ್ಲ. ಆದರೆ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಗಳಾಗಿವೆ ಎಂದು ಅವರು ಹೇಳಿದ್ದಾರೆ.

ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ

https://t.me/joinchat/Q8oMxBZkakVUy7-VpEsIXQ

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ