ಸರ್ಕಾರ ಸರ್ವಾಧಿಕಾರಿಯಾದರೆ ಜನರು ಬೀದಿಗಿಳಿಯಲೇ ಬೇಕು | ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಹೇಳಿಕೆ
ನವದೆಹಲಿ: ಸರ್ಕಾರ ಸರ್ವಾಧಿಕಾರಿಯಾದರೆ, ಜನರು ಬೀದಿಗೆ ಇಳಿಯಲೇ ಬೇಕು ಎಂದು ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ರಾವಣ ಹೇಳಿಕೆ ನೀಡಿದ್ದಾರೆ.
ದೆಹಲಿ-ಹರ್ಯಾಣ ಗಡಿ ಪ್ರದೇಶವಾದ ಸಿಂಗುದಲ್ಲಿ ನಡೆಯುತ್ತಿರುವ ರೈತರ ಚಳುವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರವು ಮೊದಲು ರೈತರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು. ನಾವು ಎಂದೆಂದಿಗೂ ರೈತರ ಜೊತೆಗೆ ನಿಲ್ಲುತ್ತೇವೆ. ಈ ಆಂದೋಲನ ಮುಗಿಯುವವರೆಗೂ ನಾವು ರೈತರಿಗೆ ಬೆನ್ನೆಲುಬಾಗಿರುತ್ತೇವೆ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನು ವಿರೋಧಿಸಿ ದೇಶಾದ್ಯಂತ ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದೆ. ರೈತರ ಹೋರಾಟವು ಇಂದಿಗೆ 8ನೇ ದಿನಕ್ಕೆ ಕಾಲಿಡುತ್ತಿದೆ. ಈ ನಡುವೆ ಕೇಂದ್ರ ಸರ್ಕಾರ ಹಾಗೂ ರೈತರ ಪ್ರತಿನಿಧಿಗಳ ಜೊತೆಗೆ ಮಾತುಕತೆಗಳೂ ನಡೆಯುತ್ತಿವೆ.
ಕೇಂದ್ರ ಸರ್ಕಾರ ರೈತರ ಪ್ರತಿನಿಧಿಗಳಿಗೆ ವಿವಿಧ ಪ್ರಸ್ತಾಪಗಳನ್ನಿರಿಸಿದರೂ, ರೈತ ಪ್ರತಿನಿಧಿಗಳು ನೂತನ ಕೃಷಿ ಕಾನೂನನ್ನು ರದ್ದುಪಡಿಸಬೇಕು ಎನ್ನುವ ನಿಲುವಿನಲ್ಲಿ ಗಟ್ಟಿಯಾಗಿ ನಿಂತಿದ್ದಾರೆ. ಈ ಕೃಷಿ ನೀತಿಯನ್ನು ರದ್ದುಪಡಿಸದೇ ರೈತರು ಕೇಂದ್ರ ಸರ್ಕಾರದ ಬೇರಾವುದೇ ಮಾತುಗಳಿಗೆ ತೃಪ್ತರಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.