5:13 AM Wednesday 27 - August 2025

ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಕಾರು ಅಪಘಾತ: 9 ಮಂದಿ ಸಾವು

26/02/2024

ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರು ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಸಸಾರಾಮ್ ನಿಂದ ವಾರಾನ್ಸಿ ಕಡೆಗೆ ಹೋಗುತ್ತಿದ್ದ ಕಾರು ದೇವಕಾಳಿ ಗ್ರಾಮದ ಮೊಹಾನಿಯಾ ಪ್ರದೇಶದ ಬಳಿ ನಿಯಂತ್ರಣ ಕಳೆದುಕೊಂಡಿದೆ.

ಪೊಲೀಸ್ ವರದಿಯ ಪ್ರಕಾರ, ಉತ್ತರ ಪ್ರದೇಶದ ಕಡೆಗೆ ಪ್ರಯಾಣಿಸುತ್ತಿದ್ದ ವಾಹನವು ನಿಯಂತ್ರಣ ಕಳೆದುಕೊಂಡಿದೆ. ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಾಗ, ಅದು ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೊಹಾನಿಯಾ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ದಿಲೀಪ್ ಕುಮಾರ್ ತಿಳಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಬುವಾ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಟ್ರಾಫಿಕ್ ಜಾಮ್ ತಡೆಗಟ್ಟಲು ಮೊದಲು ರಾಷ್ಟ್ರೀಯ ಹೆದ್ದಾರಿಯನ್ನು ತೆರವುಗೊಳಿಸುವುದು ಆದ್ಯತೆಯಾಗಿದೆ ಎಂದು ಅವರು ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version