ಬೈಕ್ ಸವಾರನಿಗೆ ಹೃದಯಾಘಾತ: ತಡೆಗೋಡೆಗೆ ಬೈಕ್ ಅಪ್ಪಳಿಸಿ ಸವಾರ ಸಾವು
ಮೈಸೂರು: ಇತ್ತೀಚೆಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೈಸೂರಿನಲ್ಲಿ ಇದೀಗ ಬೈಕ್ ಸವಾರನೊಬ್ಬ ಬೈಕ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಗೊಂಡು, ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದ ರವಿ(40) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ಬೈಕ್ ನ್ನು ಚಲಾಯಿಸುತ್ತಿದ್ದ ವೇಳೆಯೇ ಏಕಾಏಕಿ ಹೃದಯಾಘಾತದಿಂದ ಪ್ರಜ್ಞೆ ಕಳೆದುಕೊಂಡು ಬೈಕ್ ನ ಮೇಲೆಯೇ ಕುಸಿದಿದ್ದಾನೆ. ಬೈಕ್ ಚಾಲನೆಯಲ್ಲಿದ್ದ ಪರಿಣಾಮ ತಡೆಗೋಡೆಗೆ ಅಪ್ಪಳಿಸಿದ್ದು, ಪರಿಣಾಮವಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























