ಮತದಾನ ಮಾಡಿದ ಒಂದು ದಿನದ ನಂತರ ಹೃದಯಾಘಾತದಿಂದ ಬಿಜೆಪಿ ಅಭ್ಯರ್ಥಿ ಸಾವು - Mahanayaka
12:51 AM Wednesday 21 - January 2026

ಮತದಾನ ಮಾಡಿದ ಒಂದು ದಿನದ ನಂತರ ಹೃದಯಾಘಾತದಿಂದ ಬಿಜೆಪಿ ಅಭ್ಯರ್ಥಿ ಸಾವು

21/04/2024

ಉತ್ತರ ಪ್ರದೇಶದ ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನ್ವರ್ ಸರ್ವೇಶ್ ಸಿಂಗ್ ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಮೊರಾದಾಬಾದ್ ನಗರದ ಬಿಜೆಪಿ ಶಾಸಕ ರಿತೇಶ್ ಗುಪ್ತಾ ಎಎನ್ಐಗೆ ತಿಳಿಸಿದ್ದಾರೆ.

ಸಿಂಗ್ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. “ಬಿಜೆಪಿ ಅಭ್ಯರ್ಥಿ ಮತ್ತು ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಕುನ್ವರ್ ಸರ್ವೇಶ್ ಸಿಂಗ್ ಜಿ ಅವರ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ. ಇದು ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.

ದುಃಖಿತ ಕುಟುಂಬದೊಂದಿಗೆ ನನ್ನ ಸಂತಾಪವಿದೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ದುಃಖಿತ ಕುಟುಂಬ ಸದಸ್ಯರು ಮತ್ತು ಅವರ ಬೆಂಬಲಿಗರಿಗೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂಬುದು ಭಗವಾನ್ ಶ್ರೀ ರಾಮನಲ್ಲಿ ಪ್ರಾರ್ಥನೆಯಾಗಿದೆ” ಎಂದು ಸಿಎಂ ಯೋಗಿ ಬರೆದಿದ್ದಾರೆ.
ಏಪ್ರಿಲ್ 19, 2024 ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಮೊರಾದಾಬಾದ್ ಸಂಸದೀಯ ಕ್ಷೇತ್ರದಿಂದ 72 ವರ್ಷದ ಬಿಜೆಪಿ ಅಭ್ಯರ್ಥಿ ಸಿಂಗ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ