ಕು.ಸೌಜನ್ಯ ಹತ್ಯೆ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಬಿಜೆಪಿ ನಿಯೋಗ - Mahanayaka
9:38 PM Wednesday 29 - October 2025

ಕು.ಸೌಜನ್ಯ ಹತ್ಯೆ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಬಿಜೆಪಿ ನಿಯೋಗ

bjp
04/09/2023

ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕು.ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದಲ್ಲಿ ಇದ್ದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವ ವಿ. ಸುನೀಲ್ ಕುಮಾರ್, ಶಾಸಕರಾದ ಕು.ಭಾಗೀರಥಿ ಮುರಳ್ಯ, ವೇದವ್ಯಾಸ್ ಕಾಮತ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರರು ನಿಯೋಗದಲ್ಲಿ ಇದ್ದರು.

ಇತ್ತೀಚಿನ ಸುದ್ದಿ