ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ: 'ಕೈ' ಬಿಟ್ಟು 'ಕಮಲ' ಹಿಡಿದ ಅಕ್ಷಯ್ - Mahanayaka

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ: ‘ಕೈ’ ಬಿಟ್ಟು ‘ಕಮಲ’ ಹಿಡಿದ ಅಕ್ಷಯ್

30/04/2024

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ: ‘ಕೈ’ ಬಿಟ್ಟು ‘ಕಮಲ’ ಹಿಡಿದ ಅಕ್ಷಯ್
ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂ ಎಂಬವರು ತಮ್ಮ ನಾಮಪತ್ರವನ್ನು ಹಿಂಪಡೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನಾಮಪತ್ರವನ್ನು ಹಿಂಪಡೆಯುವುದಕ್ಕೆ ಅವರು ಬಿಜೆಪಿ ನಾಯಕರೊಂದಿಗೆ ಬಂದಿದ್ದರು. ಇಂಥದ್ದೇ ಘಟನೆ ಈ ಮೊದಲು ಗುಜರಾತನ ಸೂರತ್ ನಲ್ಲೂ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿ ತನ್ನ ನಾಮಪತ್ರವನ್ನು ಹಿಂಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದರು.ಅಕ್ಷಯ್ ಜೊತೆಗಿರುವ ಚಿತ್ರವನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗೀಯ ಅವರು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಬಿಜೆಪಿ ಶಾಸಕ ರಮೇಶ್ ಮೆನ್ದೋಳ ಜೊತೆ ಅಕ್ಷಯ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆಯುವುದಕ್ಕಾಗಿ ಬಂದಿದ್ದರು. ಇಲ್ಲಿ ಚುನಾವಣೆ ನಡೆಯುವುದಕ್ಕೆ ಎರಡು ವಾರಗಳಷ್ಟೇ ಇವೆ. ಮೇ 13ರ 4ನೇ ಹಂತದ ಚುನಾವಣೆಯ ವೇಳೆ ಈ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಹಾಲಿ ಸಂಸದ ಬಿಜೆಪಿಯ ಶಂಕರ್ ಲಾಲ್ ವಾಣಿ ಅವರು ಇಲ್ಲಿ ಅಭ್ಯರ್ಥಿಯಾಗಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 


Provided by

ಇತ್ತೀಚಿನ ಸುದ್ದಿ