ಬಿಜೆಪಿ ಕುಟುಂಬವನ್ನು ಅಧಿಕಾರಕ್ಕೆ ತರುವ ಉದ್ದೇಶ ಹೊಂದಿಲ್ಲ: ಭೂಪೇಂದ್ರ ಯಾದವ್ - Mahanayaka

ಬಿಜೆಪಿ ಕುಟುಂಬವನ್ನು ಅಧಿಕಾರಕ್ಕೆ ತರುವ ಉದ್ದೇಶ ಹೊಂದಿಲ್ಲ: ಭೂಪೇಂದ್ರ ಯಾದವ್

Bhupendra Yadav
06/03/2023


Provided by

ಬೆಂಗಳೂರು: ಭಾರತವನ್ನು ಅಮೃತಕಾಲದಲ್ಲಿ ಸಶಕ್ತ ಮತ್ತು ಸಾಮರ್ಥ್ಯಶಾಲಿ ದೇಶವನ್ನಾಗಿ ಮಾಡುವ ಉದ್ದೇಶವನ್ನು ಇಟ್ಟುಕೊಂಡು ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಿ ಜನರ ಮುಂದೆ ಹೋಗಲಿದ್ದೇವೆ. ಬಿಜೆಪಿ ಆಡಳಿತವನ್ನು ಬೆಂಬಲಿಸಿ ಮತ್ತೊಮ್ಮೆ ಬಿಜೆಪಿಗೆ ಕರ್ನಾಟಕದಲ್ಲಿ ಆಡಳಿತಾವಕಾಶ ಕೊಡಿ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಮನವಿ ಮಾಡಿದರು.

ಬೆಂಗಳೂರಿನ “ಭಾರತೀಯ ವಿದ್ಯಾಭವನ”ದಲ್ಲಿ ನಡೆದ ಬಿಜೆಪಿ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನದ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಪ್ರಣಾಳಿಕೆಯು ಒಂದು ಕುಟುಂಬವನ್ನು ಅಧಿಕಾರಕ್ಕೆ ತರುವ ಉದ್ದೇಶವನ್ನು ಹೊಂದಿಲ್ಲ. ಒಂದು ವರ್ಗವನ್ನು ಅಧಿಕಾರಕ್ಕೆ ತರುವ ಉದ್ದೇಶ ನಮ್ಮದಲ್ಲ. ಒಂದು ನಿರ್ದಿಷ್ಟ ಮತಬ್ಯಾಂಕನ್ನು ತೃಪ್ತಿಪಡಿಸುವ ಉದ್ದೇಶ ನಮ್ಮದಲ್ಲ ಎಂದು ತಿಳಿಸಿದರು.

ಭಾರತವು ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ವಸುಧೈವ ಕುಟುಂಬಕಂ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ನುಡಿದರು.

ಬೆಂಗಳೂರಿಗೆ ಎರಡು ತಲೆಮಾರುಗಳಷ್ಟು ಹಿಂದೆಯೇ ಕಾಂಗ್ರೆಸ್ ಆಡಳಿತದ ಕಾಲದಲ್ಲಿ ಸೆಟಲೈಟ್ ಟೌನ್ ಮಾಡಬೇಕಿತ್ತು. ಹಲವು ದಶಕಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷವು ದೂರದೃಷ್ಟಿಯನ್ನು ಹೊಂದಿರದ ಕಾರಣ ಬೆಂಗಳೂರಿನಂಥ ನಗರಗಳು ಮಾಲಿನ್ಯದ ಸಮಸ್ಯೆಯನ್ನು ಎದುರಿಸಬೇಕಾಗಿದೆ ಎಂದ ಅವರು, ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತನೆ ಮಾಡುವ ಕಾರ್ಯ ಅನಿವಾರ್ಯವಾಗಿದೆ ಎಂದು ತಿಳಿಸಿದರು. ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮುಖಂಡ ಬ್ಯಾಟರಂಗೇಗೌಡ ಅವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ