1:49 AM Thursday 4 - December 2025

ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡರೆ ತಪ್ಪೇನಿದೆ? | ಕುಮಾರಸ್ವಾಮಿ ಪ್ರಶ್ನೆ

20/11/2020

ಚನ್ನಪಟ್ಟಣ: ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದು, ಸ್ಥಳೀಯ ಚುನಾವಣೆಗೆ ಸಂಬಂಧಿಸಿದಂತೆ ಅವರು ಈ ಹೇಳಿಕೆ ನೀಡಿದ್ದು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಅವರು ಸಮರ್ಥಿಸಿಕೊಂಡರು.

 ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ವಿಚಾರವಾಗಿ ಅವರು “ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ನವಲಗುಂದದಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ಹಾಗಾಗಿ ಸ್ಥಳೀಯವಾಗಿ ಮೂರು ಪಕ್ಷದವರು ಹೊಂದಾಣಿಕೆಯಾಗುತ್ತಿದ್ದಾರೆ. ಅದು ಸ್ಥಳೀಯ ವಿಚಾರ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿಯಾಗಿದೆ ಎಂದಾಕ್ಷಣ ಜೆಡಿಎಸ್ ಗೆ ಬಿಜೆಪಿ ಬಗ್ಗೆ ಮೃದುಧೋರಣೆ ಇದೆ ಎಂದು ತಿಳಿಯಬೇಡಿ ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಹೇಳಿದರು.

ಇತ್ತೀಚಿನ ಸುದ್ದಿ

Exit mobile version