ಬಿಜೆಪಿ ಕಾರ್ಯಕರ್ತರು ಕರಪತ್ರ ಹಂಚುವ ಮೂಲಕ ಕೋವಿಡ್ ಹರಡುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ - Mahanayaka
6:58 PM Thursday 16 - October 2025

ಬಿಜೆಪಿ ಕಾರ್ಯಕರ್ತರು ಕರಪತ್ರ ಹಂಚುವ ಮೂಲಕ ಕೋವಿಡ್ ಹರಡುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ

akolesh
29/01/2022

ಲಕ್ನೋ: ಬಿಜೆಪಿ ಕಾರ್ಯಕರ್ತರು ಕರಪತ್ರಗಳನ್ನು ಹಂಚುವ ಮೂಲಕ ಕೋವಿಡ್ -19 ಸೋಂಕು ಹರಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಮುಜಾ ಫರ್‌ ನಗರದಲ್ಲಿ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌ ಧರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಖಿಲೇಶ್ ಯಾದವ್ ಈ ಹೇಳಿಕೆಗಳನ್ನು ನೀಡಿದ್ದಾರೆ.


Provided by

ಕೋವಿಡ್ ಸೋಂಕು ಹರಡಲು ಬಿಜೆಪಿಯ ಕಾರ್ಯಕರ್ತರು ಕರಪತ್ರಗಳನ್ನು ಹಂಚುತ್ತಿದ್ದಾರೆ. ಕೋವಿಡ್ ಹೇಗೆ ಹರಡುತ್ತದೆ ಎಂಬುದನ್ನು ಮರೆತಿರುವ ಜನರನ್ನು ಚುನಾವಣಾ ಆಯೋಗ ತಡೆಯಬೇಕು ಎಂದು ಅಖಿಲೇಶ್ ಯಾದವ್ ಅವರು ಕೋವಿಡ್ -19 ರ ಹರಡುವಿಕೆಯನ್ನು ನಿಯಂತ್ರಿಸಲು ಆಯೋಗ ವಿಧಿಸಿರುವ ನಿರ್ಬಂಧಗಳ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪತ್ರಿಕಾಗೋಷ್ಠಿಯಲ್ಲಿ ಎಸ್‌ಪಿ-ಆರ್‌ ಎಲ್‌ ಡಿ ಮೈತ್ರಿಯು ರಾಜ್ಯದಲ್ಲಿ ನಕಾರಾತ್ಮಕ ರಾಜಕೀಯವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಅಧಿಕಾರಕ್ಕೆ ಬಂದರೆ ತಮ್ಮ ಸರ್ಕಾರವು 15 ದಿನಗಳಲ್ಲಿ ಕಬ್ಬು ರೈತರಿಗೆ ಪಾವತಿಯನ್ನು ಖಚಿತಪಡಿಸುತ್ತದೆ ಎಂದು ಅಖಿಲೇಶ್ ಹೇಳಿದರು.

ಅದೇ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಯಂತ್ ಚೌಧರಿ, ರೈತರು ಮತ್ತು ಕಾರ್ಮಿಕರನ್ನು ಸಂಘಟಿಸುವ ಚೌಧರಿ ಚರಣ್ ಸಿಂಗ್ ಅವರ ಉದ್ದೇಶವನ್ನು ಮತ್ತಷ್ಟು ಹೆಚ್ಚಿಸಲು ಆರ್‌ ಎಲ್‌ ಡಿ ಎಸ್‌ ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಾಂಧಿಧಾಮ್-ಪುರಿ ಎಕ್ಸ್ ​ಪ್ರೆಸ್ ರೈಲ್‌ ನಲ್ಲಿ ಬೆಂಕಿ

ಮದ್ಯದ ಪಾರ್ಟಿ: ‘ಗಟ್ಟಿಮೇಳ’ ಧಾರಾವಾಹಿಯ ನಟ ರಕ್ಷಿತ್‌ ವಿರುದ್ಧ ಪ್ರಕರಣ

ಬೋಟ್ ದುರಂತ: ಇಬ್ಬರು ಅಪ್ರಾಪ್ತರು ನಾಪತ್ತೆ, 10 ಮಂದಿ ರಕ್ಷಣೆ

ದೇಶದಲ್ಲೇ ಬಿಎಸ್ಪಿ ಎರಡನೇ ಶ್ರೀಮಂತ ಪಕ್ಷ, ಮೊದಲ ಸ್ಥಾನದಲ್ಲಿ ಬಿಜೆಪಿ

ಸಮುದ್ರಕ್ಕೆ ಹಾರಿ ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಲು ಹೋದ ಸ್ನೇಹಿತನೇ ಸಮುದ್ರಪಾಲು

 

ಇತ್ತೀಚಿನ ಸುದ್ದಿ