ಟ್ರಾಕ್ಟರ್ ಟ್ರಾಲಿಯಲ್ಲಿ ಸೆಗಣಿ ತಂದು ಬಿಜೆಪಿ ನಾಯಕನ ಮನೆಯ ಮುಂದೆ ಚೆಲ್ಲಿದ ರೈತರು! - Mahanayaka

ಟ್ರಾಕ್ಟರ್ ಟ್ರಾಲಿಯಲ್ಲಿ ಸೆಗಣಿ ತಂದು ಬಿಜೆಪಿ ನಾಯಕನ ಮನೆಯ ಮುಂದೆ ಚೆಲ್ಲಿದ ರೈತರು!

02/01/2021

ಚಂಡೀಗಢ:  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ಪ್ರತಿಭಟನಾಕಾರರು ಬಿಜೆಪಿ ಮುಖಂಡರೊಬ್ಬರ ಮನೆಯ ಮುಂದೆ ಟ್ರಾಕ್ಟರ್ ಟ್ರಾಲಿಯಲ್ಲಿ ದನದ ಸೆಗಣಿ ತಂದು ಸುರಿದ ಘಟನೆ ನಡೆದಿದೆ.

ತನ್ನ ಮನೆಯ ಮುಂದೆ ರೈತರು ಸೆಗಣಿ ಸುರಿದ ಘಟನೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುವಂತೆ ಬಿಜೆಪಿಯ ಮಾಜಿ ಸಚಿವ,  ತೀಕ್ಷಣ್ ಸೂದ್  ಕೂಡ ಪ್ರತಿಯಾಗಿ ಧರಣಿ ನಡೆಸಿದ್ದಾರೆ. ಮನೆಯ ಮುಂದೆ ಸೆಗಣಿ ಸುರಿದು  ಬಿಜೆಪಿ ನಾಯಕ ತೀಕ್ಷಣ್ ಸೂದ್ ಗೆ ರೈತರು ಮುಜುಗರ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತೀಕ್ಷಣ್ ಸೂದ್ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಸಂದರ್ಭ ಟ್ರಾಕ್ಟರ್ ಟ್ರಾಲಿಯಲ್ಲಿ ಸೆಗಣಿ ತಂದು ಅವರ ಮನೆ ಮುಂಭಾಗದಲ್ಲಿ ಸುರಿಯಲಾಯಿತು.

ಇನ್ನೂ ಈ ಘಟನೆ ಸಂಬಂಧ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಎಚ್ಚರಿಕೆ ನೀಡಿದ್ದು, ಯಾರು ಕೂಡ ಈ ರೀತಿಯ ವರ್ತನೆ ತೋರಬೇಡಿ ಎಂದು ಹೇಳಿದ್ದಾರೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ