ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕನಿಗೆ 50 ಸಾವಿರ ಪರಿಹಾರ ನೀಡಿದ ಆರಗ‌ ಜ್ಞಾನೇಂದ್ರ - Mahanayaka
8:34 AM Wednesday 4 - February 2026

ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕನಿಗೆ 50 ಸಾವಿರ ಪರಿಹಾರ ನೀಡಿದ ಆರಗ‌ ಜ್ಞಾನೇಂದ್ರ

mangalore case
23/11/2022

ಮಂಗಳೂರು: ನಗರದ ನಾಗುರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌  ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತದನಂತರ ಕಂಕನಾಡಿಯಲ್ಲಿರೋ‌ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ರಿಕ್ಷಾ ಚಾಲಕರ ಆರೋಗ್ಯ ವಿಚಾರಿಸಿದ್ರು. ಇದೀಗ ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

50 ಸಾವಿರ ಪರಿಹಾರ:

ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ದಾಖಲಾಗಿರುವ  ಕಂಕನಾಡಿಯಲ್ಲಿರುವ ಆಸ್ಪತ್ರೆಗೆ ಗೃಹ ಸಚಿವ ಆರಗ ಭೇಟಿ ನೀಡಿದರು.

ಇದೇ ವೇಳೆ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರಿಗೆ 50,000 ಪರಿಹಾರ  ನೀಡಿದ ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ