ರೆಸ್ಟೋರೆಂಟ್ ಗೆ ಬಾಂಬ್ ಬೆದರಿಕೆ ಕರೆ: ತನಿಖೆ ನಡೆಸಿದಾಗ ಸತ್ಯಾಂಶ ಬಯಲು - Mahanayaka

ರೆಸ್ಟೋರೆಂಟ್ ಗೆ ಬಾಂಬ್ ಬೆದರಿಕೆ ಕರೆ: ತನಿಖೆ ನಡೆಸಿದಾಗ ಸತ್ಯಾಂಶ ಬಯಲು

banglore
28/03/2024

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಮಾಸುವ ಮೊದಲೇ ವ್ಯಕ್ತಿಯೋರ್ವ ರೆಸ್ಟೋರೆಂಟ್ ಗೆ ಬಾಂಬ್ ಬೆದರಿಕೆ ಕರೆ ಮಾಡಿರುವ ಘಟನೆ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ನಲ್ಲಿ ನಡೆದಿದೆ.

ಶೀಘ್ರದಲ್ಲೇ ರೆಸ್ಟೋರೆಂಟ್ ನಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದು ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದಾಗ ಸತ್ಯಾಂಶ ಬಯಲಾಗಿದೆ.

ಬೆದರಿಕೆ ಕರೆ ಬಂದ ತಕ್ಷಣವೇ ರೆಸ್ಟೋರೆಂಟ್ ನ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು, ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಅನುಮಾನದ ಮೇರೆಗೆ ಇಂದಿರಾ ನಗರ ಬ್ರಾಂಚ್ ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ರೆಸ್ಟೋರೆಂಟ್ ನವರು ತನ್ನ ಸಂಬಳ ನೀಡದ ಕಾರಣ ಹುಸಿ ಬಾಂಬ್ ಬೆದರಿಕೆ ಹಾಕಿರೋದಾಗಿ ವೇಲು ಸತ್ಯ ಒಪ್ಪಿಕೊಂಡಿದ್ದಾನೆ. ಘಟನೆ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

 

ಇತ್ತೀಚಿನ ಸುದ್ದಿ