ಬಿಪಿಎಲ್ ಕಾರ್ಡ್: ಅನರ್ಹರನ್ನು ಪತ್ತೆ ಮಾಡಿ ಕಾರ್ಡ್ ರದ್ದುಪಡಿಸಲು ಸಿಎಂ ಸೂಚನೆ - Mahanayaka
7:20 PM Thursday 11 - September 2025

ಬಿಪಿಎಲ್ ಕಾರ್ಡ್: ಅನರ್ಹರನ್ನು ಪತ್ತೆ ಮಾಡಿ ಕಾರ್ಡ್ ರದ್ದುಪಡಿಸಲು ಸಿಎಂ ಸೂಚನೆ

siddaramaiah
11/09/2025

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ 3.65 ಲಕ್ಷ ಬಿಪಿಎಲ್ ಪಡಿತರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಈ ನಡುವೆ ಮತ್ತಷ್ಟು ಬಿಪಿಎಲ್ ಕಾರ್ಡ್ ಅನರ್ಹರನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಗೆ ಖಡಕ್ ಸೂಚನೆ ನೀಡಿದ್ದಾರೆ.


Provided by

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಅಂತ ಸೂಚನೆ ನೀಡಿದ್ದಾರೆ.

ಅರ್ಹರು ಯಾರಾದರೂ ಕಾರ್ಡ್ ನಿಂದ ವಂಚಿತರಾಗಿದ್ದರೆ ಅಂತಹವರನ್ನು ಪತ್ತೆ ಮಾಡಿ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲಿ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ