ಬಿಎಸ್‌ವೈ ರಾಜ್ಯ ರಾಜಕೀಯದಲ್ಲಿ ಶ್ರೀಕೃಷ್ಣ ಪಾತ್ರ ವಹಿಸಲಿದ್ದಾರೆ: ಶಾಸಕ ಎನ್.ಮಹೇಶ್ - Mahanayaka
12:21 AM Tuesday 8 - September 2026

ಬಿಎಸ್‌ವೈ ರಾಜ್ಯ ರಾಜಕೀಯದಲ್ಲಿ ಶ್ರೀಕೃಷ್ಣ ಪಾತ್ರ ವಹಿಸಲಿದ್ದಾರೆ: ಶಾಸಕ ಎನ್.ಮಹೇಶ್

n mahesh
30/03/2022

ಚಾಮರಾಜನಗರ: ರಾಜ್ಯ ರಾಜಕೀಯದಲ್ಲಿ ಇನ್ನು ಮುಂದೆ ಯಡಿಯೂರಪ್ಪ ಶ್ರೀಕೃಷ್ಣನ ಪಾತ್ರ ವಹಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

ಗೌಡಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ನಂಬಿಕೊಂಡವರನ್ನು ಯಡಿಯೂರಪ್ಪ ಎಂದಿಗೂ ಕೈ ಬಿಟ್ಟಿಲ್ಲ ಎಂದರು.

ರಾಜ್ಯ ರಾಜಕೀಯದಲ್ಲಿ ಇನ್ನು ಮುಂದೆ ಯಡಿಯೂರಪ್ಪ ಶ್ರೀಕೃಷ್ಣನ ಪಾತ್ರ ವಹಿಸಲಿದ್ದಾರೆ. ಬಿಎಸ್‌ವೈ ಇದುವರೆಗೆ ಅರ್ಜುನನ ಪಾತ್ರ ನಿರ್ವಹಿಸಿ ಕೆಳಗಿಳಿದಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಪಕ್ಷಗಳು ಅವರ ಕಥೆ ಮುಗಿಯಿತು ಎಂದುಕೊಂಡಿದ್ದವು. ಆದರೆ ಬಿಎಸ್‌ವೈ ರಾಜ್ಯ ರಾಜಕೀಯದಲ್ಲಿ ಶ್ರೀಕೃಷ್ಣ ಪಾತ್ರ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಯಡಿಯೂರಪ್ಪ ಬದಲಾವಣೆ ಆಗಿದ್ದಾರೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ತರಲು ಅವರು ಬದಲಾವಣೆ ಆಗಿದ್ದಾರೆ. ಕಂಬಳಿ ಹುಳುವಾಗಿದ್ದ ಯಡಿಯೂರಪ್ಪ ಈಗ ಚಿಟ್ಟೆಯಾಗಿ ಬದಲಾಗಿದ್ದಾರೆ. ಅವರನ್ನು ಎಲ್ಲಿಗೆ ತಲುಪಿಸಬೇಕಿತ್ತೋ ಅಲ್ಲಿಗೆ ತಲುಪಿಸಿದ್ದಾರೆ ಎಂದು ಶಾಸಕ ಎನ್.ಮಹೇಶ್ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ್​ ಭಟ್: ಸಿಎಫ್ಐ ಪ್ರತಿಭಟನೆ

ಸಿಆರ್‌ಪಿಎಫ್‌ ಬಂಕರ್ ಮೇಲೆ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆ

ಇಂಧನ ದರ ಏರಿಕೆ ಮೂಲಕ ನರೇಂದ್ರ ಮೋದಿ ಸರ್ಕಾರ ಪ್ರತಿ ದಿನ ಸುಲಿಗೆ ಮಾಡುತ್ತಿದೆ: ಕಾಂಗ್ರೆಸ್‌ ಆಕ್ರೋಶ

ಶ್ರೀನಗರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಹತ್ಯೆ

ಇತ್ತೀಚಿನ ಸುದ್ದಿ

mobil chat sitesi