100 ಅಡಿ ಆಳಕ್ಕೆ ಉರುಳಿ ಬಿದ್ದ ಬಸ್: 6 ಜನರಿಗೆ ಗಂಭೀರ ಗಾಯ: 23 ಜನರಿಗೆ ಗಾಯ
28/04/2024
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಸ್ಸೊಂದು ಉರುಳಿ ಬಿದ್ದ ಘಟನೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ದತ್ತಪೀಠಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಿದ್ದಿದೆ.
ಶಿರಾದಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಸ್ ಹೊರಟಿತ್ತು. ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬಸ್ ಉರುಳಿ ಬಿದ್ದಿದೆ.
ಘಟನೆಯಲ್ಲಿ 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth