100 ಅಡಿ ಆಳಕ್ಕೆ ಉರುಳಿ ಬಿದ್ದ ಬಸ್: 6 ಜನರಿಗೆ ಗಂಭೀರ ಗಾಯ: 23 ಜನರಿಗೆ ಗಾಯ - Mahanayaka

100 ಅಡಿ ಆಳಕ್ಕೆ ಉರುಳಿ ಬಿದ್ದ ಬಸ್: 6 ಜನರಿಗೆ ಗಂಭೀರ ಗಾಯ: 23 ಜನರಿಗೆ ಗಾಯ

chikkamagaluru
28/04/2024

ಚಿಕ್ಕಮಗಳೂರು:  ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಸ್ಸೊಂದು ಉರುಳಿ ಬಿದ್ದ ಘಟನೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ  ನಡೆದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ದತ್ತಪೀಠಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬಸ್  ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಿದ್ದಿದೆ.

ಶಿರಾದಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಸ್ ಹೊರಟಿತ್ತು. ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ   ಬಸ್ ಉರುಳಿ ಬಿದ್ದಿದೆ.

ಘಟನೆಯಲ್ಲಿ 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ