ಖಾಸಗಿ ಬಸ್ ಗೆ ತಗಲಿದ ವಿದ್ಯುತ್ ತಂತಿ: ಐವರು ಪ್ರಯಾಣಿಕರ ದಾರುಣ ಸಾವು - Mahanayaka

ಖಾಸಗಿ ಬಸ್ ಗೆ ತಗಲಿದ ವಿದ್ಯುತ್ ತಂತಿ: ಐವರು ಪ್ರಯಾಣಿಕರ ದಾರುಣ ಸಾವು

12/01/2021

ಚೆನ್ನೈ: ಖಾಸಗಿ ಬಸ್ ಗೆ ವಿದ್ಯುತ್ ತಂತಿ ತಗಲಿದ ಪರಿಣಾಮ ಐವರು ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯಲ್ಲಿ ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

 

ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಖಾಸಗಿ ಬಸ್ಸೊಂದು ತಿರವೈಯ್ಯೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಗೆ ವಿದ್ಯುತ್ ತಂತಿ ತಗಲಿದೆ. ಈ ಸಂದರ್ಭ ಬಸ್ ನಲ್ಲಿದ್ದ ಪ್ರಯಾಣಿಕರ ಮೇಲೆ ವಿದ್ಯುತ್ ಪ್ರವಹಿಸಿದೆ.

 

ಘಟನೆಯಲ್ಲಿ ಐವರು ಮೃತಪಟ್ಟಿದ್ದರೆ, 10ಕ್ಕೂ ಅಧಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯುತ್ ಸಂಸ್ಥೆಯ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ