ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24ರಂದು ಸಚಿವ ಸಂಪುಟ ಸಭೆ - Mahanayaka

ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24ರಂದು ಸಚಿವ ಸಂಪುಟ ಸಭೆ

karnataka
10/04/2025

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಎರಡು ಬಾರಿ ಮುಂದೂಡಿಕೆಯಾಗಿತ್ತು. ಇದೀಗ  ಏಪ್ರಿಲ್ 24 ಕ್ಕೆ ಮತ್ತೆ ಸಚಿವ ಸಂಪುಟ ಸಭೆ ನಿಗದಿಪಡಿಸಲಾಗಿದೆ.

ಹಳೆಯ ಮೈಸೂರು ಪ್ರದೇಶಕ್ಕೆ ಹೆಚ್ಚಿನ ಗಮನ ಸೆಳೆಯುವ ನಿರೀಕ್ಷೆಯಿದ್ದ ಈ ಸಚಿವ ಸಂಪುಟ ಸಭೆಯನ್ನು ಆರಂಭದಲ್ಲಿ ಫೆಬ್ರವರಿ 15 ರಂದು ನಡೆಸಲು ಯೋಜಿಸಲಾಗಿತ್ತು. ನಂತರ ಫೆಬ್ರವರಿ 17 ಕ್ಕೆ ಮುಂದೂಡಲಾಯಿತು. ನಂತರ ವಿವಿಧ ಕಾರಣಗಳಿಗಾಗಿ ಮತ್ತೆ ಮುಂದೂಡಲಾಗಿತ್ತು. ಇದೀಗ ಏಪ್ರಿಲ್ 24 ರಂದು ನಡೆಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಬುಧವಾರ ನಗರದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಚಿವ ಕೆ. ವೆಂಕಟೇಶ್ ಅವರು, ಏಪ್ರಿಲ್ 24 ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಸಿದ್ಧತೆಗಳನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


Provided by

ಈ ಬಾರಿಯ ಬಜೆಟ್ ನಲ್ಲಿ ಚಾಮರಾಜನಗರ ಜಿಲ್ಲೆ ಸೀಮಿತ ಹಣ ಹಾಗೂ ಯೋಜನೆಗಳನ್ನು ನೀಡಲಾಗಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ