ಮಳೆಯಿಂದ ರಸ್ತೆ ಕಾಣದೇ ಮುಖಾಮುಖಿ ಡಿಕ್ಕಿಯಾದ ಕಾರು - Mahanayaka

ಮಳೆಯಿಂದ ರಸ್ತೆ ಕಾಣದೇ ಮುಖಾಮುಖಿ ಡಿಕ್ಕಿಯಾದ ಕಾರು

chikkamagaluru
22/10/2024


Provided by

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರದ ಹಿನ್ನೆಲೆ ಭಾರೀ ಮಳೆಗೆ ರಸ್ತೆ ಕಾಣದೆ ಕಾರುಗಳ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಎನ್.ಆರ್.ಪುರ ತಾಲೂಕಿನ ದೇವದಾನ ಎಸ್ಟೇಟ್ ಬಳಿ ನಡೆದಿದೆ.

ಅದೃಷ್ಟವಶಾತ್ 2 ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಗುಂಡಿ, ಬಾಳೆಹೊನ್ನೂರು ಸುತ್ತಮುತ್ತಾ ಧಾರಾಕಾರ ಮಳೆಯಾಗಿದೆ, ಮಾಗುಂಡಿ ಸಮೀಪ ಮಳೆ ನೀರು ಮನೆಗಳಿಗೆ ನುಗ್ಗುವ ಆತಂಕ ಮಲೆನಾಡಲ್ಲಿ ಮಧ್ಯಾಹ್ನದ ಬಳಿಕ ಭಾರೀ ಮಳೆಯಾಗಿದೆ. ಕಳೆದೊಂದು ವಾರದಿಂದ ನಿರಂತವಾಗಿ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ