ಜಾದವ್ ಪುರ ವಿವಿ ಘರ್ಷಣೆ: ಬಂಗಾಳ ಸಚಿವ, ಚಾಲಕನ ವಿರುದ್ಧ ಪ್ರಕರಣ ದಾಖಲು - Mahanayaka
10:46 PM Wednesday 11 - March 2026

ಜಾದವ್ ಪುರ ವಿವಿ ಘರ್ಷಣೆ: ಬಂಗಾಳ ಸಚಿವ, ಚಾಲಕನ ವಿರುದ್ಧ ಪ್ರಕರಣ ದಾಖಲು

06/03/2025

ಜಾದವ್ ಪುರ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆ ಮತ್ತು ಘರ್ಷಣೆಗೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಬಂಗಾಳದ ಶಿಕ್ಷಣ ಸಚಿವ ಬ್ರಾತ್ಯ ಬಸು ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬಸು ಅವರಲ್ಲದೇ ಅವರ ಕಾರು ಚಾಲಕ ಮತ್ತು ಪ್ರಾಧ್ಯಾಪಕ ಮತ್ತು ತೃಣಮೂಲ ಕಾಂಗ್ರೆಸ್ ಮುಖಂಡ ಓಂ ಪ್ರಕಾಶ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಶನಿವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಸು ಅವರ ಕಾರಿನಿಂದಾಗಿ ಗಾಯಗಳಾಗಿವೆ ಎಂದು ಆರೋಪಿಸಿ ಗಾಯಗೊಂಡ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಬಸು ಅವರ ಬೆಂಗಾವಲು ಪಡೆ ಮತ್ತು ಜಾದವ್ ಪುರ ವಿಶ್ವವಿದ್ಯಾಲಯದ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ನಡುವೆ ಸಂಭವಿಸಿದ ಹಿಂಸಾತ್ಮಕ ಘರ್ಷಣೆಗಳನ್ನು ನಿಯಂತ್ರಿಸಲು ಸಾಧ್ಯವಾಗದ ರಾಜ್ಯ ಪೊಲೀಸರನ್ನು ಕಲ್ಕತ್ತಾ ಹೈಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತ್ತು. ಪೊಲೀಸರ ಗುಪ್ತಚರ ವೈಫಲ್ಯ ಅಥವಾ ಅಂತಹ ವರದಿಗಳನ್ನು ಸಚಿವರು ಧಿಕ್ಕರಿಸಿದ್ದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ನ್ಯಾಯಮೂರ್ತಿ ತೀರ್ಥಂಕರ್ ಘೋಷ್ ಕಳವಳ ವ್ಯಕ್ತಪಡಿಸಿದ್ದರು.

ಕೋಲ್ಕತಾದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ ಸಂಭವಿಸಬಾರದು ಎಂದು ಹೇಳಿದ ನ್ಯಾಯಮೂರ್ತಿ ಘೋಷ್, ಅಶಾಂತಿಯನ್ನು ನಿಭಾಯಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘರ್ಷಣೆಯ ಸಂದರ್ಭಗಳನ್ನು ದೂರವಿರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ತೃಣಮೂಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ