ಧಾರ್ಮಿಕ ಗ್ರಂಥ ಹರಿದ ಆರೋಪ: ಯುವಕನನ್ನು ಥಳಿಸಿ ಹತ್ಯೆ
ಪಂಜಾಬ್ ನ ಫಿರೋಜ್ ಪುರದ ಗುರುದ್ವಾರದಲ್ಲಿ ಪೂಜ್ಯ ಗುರು ಗ್ರಂಥ ಸಾಹಿಬ್ನ ಪುಟಗಳನ್ನು ಹರಿದುಹಾಕಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಬಂಡಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಕ್ಷಿಶ್ ಸಿಂಗ್ ಎಂದು ಗುರುತಿಸಲ್ಪಟ್ಟ ಎಂಬ ವ್ಯಕ್ತಿಯು ಗುರುದ್ವಾರದ ಆವರಣವನ್ನು ಪ್ರವೇಶಿಸಿದ ನಂತರ ಪವಿತ್ರ ಪುಸ್ತಕದ ಕೆಲವು ಪುಟಗಳನ್ನು ಹರಿದುಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಅವನನ್ನು ತಕ್ಷಣ ಜನರು ಹಿಡಿದು ಥಳಿಸಿ ಕೊಂದಿದ್ದಾರೆ. ಭಾನುವಾರ ಬೆಳಿಗ್ಗೆಯವರೆಗೆ, ಬಕ್ಷಿಶ್ ಅವರನ್ನು ಕೊಂದ ಗುಂಪಿನ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂತ್ರಸ್ತನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಪೊಲೀಸರ ಪ್ರಕಾರ, ಪುಟಗಳನ್ನು ಹರಿದುಹಾಕಿದ ನಂತರ ಬಕ್ಷಿಶ್ ಪರಾರಿಯಾಗಲು ಪ್ರಯತ್ನಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು. ಘಟನೆಯ ಬಗ್ಗೆ ತಿಳಿದ ಸ್ಥಳೀಯರು ಗುರುದ್ವಾರದಲ್ಲಿ ಜಮಾಯಿಸಿ ಬಕ್ಷಿಶ್ ಅವರನ್ನು ತೀವ್ರ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth