ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿಟ್ಟ ಪ್ರಕರಣ: ಅಧಿಕಾರಿಗಳ ವಿರುದ್ಧವೂ ಕೇಸ್ ದಾಖಲು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆಯ ಅರಣ್ಯದಂಚಿನ ಗ್ರಾಮದಲ್ಲಿ ಹುಲಿ ಹಿಡಿಯಲು ವಿಫಲವಾದ ಅಧಿಕಾರಿಗಳನ್ನು ರೈತರು ಬೋನಿನಲ್ಲಿ ಕೂಡಿ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಕ್ಕೆ ಅಡ್ಡಿ ಎಂದು ಐವರು ರೈತರ ಮೇಲೆ ಎಫ್ ಐಆರ್ ದಾಖಲಾಗಿತ್ತು, ಇದರ ಬೆನ್ನಲ್ಲೇ ಅಧಿಕಾರಿಗಳ ವಿರುದ್ಧವೂ ಕೇಸ್ ದಾಖಲಾಗಿದೆ.
ಬೋನಿನಲ್ಲಿ ಅರಣ್ಯಾಧಿಕಾರಿಗಳನ್ನ ಕೂಡಿಟ್ಟ ಘಟನೆಗೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿದೆ. ಈ ನಡುವೆ ರೈತ ಮಹಿಳೆ ಕಮಲಮ್ಮ ನೀಡಿದ ದೂರಿನಂತೆ 15 ಮಂದಿ ಅರಣ್ಯ ಸಿಬ್ಬಂದಿ ವಿರುದ್ಧ BNS ACT 2023 (U/S 109 115 (2) 74 190 126 (2) 351 (2) ಅಡಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಮೀನಿಗೆ ನುಗ್ಗಿ ಅಧಿಕಾರಿಗಳು ಹಲ್ಲೆ ನಡೆಸಿರುವ ಆರೋಪ ಮಾಡಲಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಅರಣ್ಯದಂಚಿನ ಗ್ರಾಮದಲ್ಲಿ, ಹುಲಿ, ಚಿರತೆ ಕಾಟ ಮಿತಿ ಮಿರಿತ್ತು. ಜಾನುವಾರುಗಳನ್ನ ಮೃಗಗಳು ಕೊಂದು ಹಾಕಿದ್ದವು. ಅರಣ್ಯ ಇಲಾಖೆ ರೈತರ ಜಮೀನಿನಲ್ಲಿ ಬೋನಿರಿಸಿದ್ದನ್ನ ಬಿಟ್ಟರೇ, ಏನೂ ಮಾಡಿರಲಿಲ್ಲ. ಇದರಿಂದ ರೊಚ್ಚಿಗೆದಿದ್ದ ರೈತರು, ಜಮೀನಿನಲ್ಲಿದ್ದ ಬೋನಿನಲ್ಲೇ ಅಧಿಕಾರಿಗಳನ್ನ ಅರ್ಧ ಗಂಟೆ ಕಾಲ ಕೂಡಿ ಹಾಕಿ ಬಿಸಿ ಮುಟ್ಟಿಸಿದ್ದರು. ಮೃಗಗಳ ಸೆರೆಗೆ ಆಗ್ರಹಿಸಿ ಬಳಿಕ ಬಿಡುಗಡೆ ಮಾಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD