ಬಡ-ಮಧ್ಯಮ ಸರ್ಕಾರಕ್ಕೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ - Mahanayaka

ಬಡ–ಮಧ್ಯಮ ಸರ್ಕಾರಕ್ಕೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

bharat rice
01/11/2024

ಬೆಂಗಳೂರು: ಬಡ ಹಾಗೂ ಮಧ್ಯಮ ವರ್ಗದ ಜನತೆಗೆ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬೆಂಗಳೂರಿನಲ್ಲಿ ಕಡಿಮೆ ಬೆಲೆಯಲ್ಲಿ ಭಾರತ್ ಉತ್ಪನ್ನಗಳಾದ ಅಕ್ಕಿ, ಬೇಳೆ ಕಾಳುಗಳ ಪೂರೈಕೆಗೆ ಮುಂದಾಗಿದೆ.

ಈ ದೀಪಾವಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಭಾರತ್ ಉತ್ಪನ್ನಗಳ ಹಂತ 2ರಲ್ಲಿ ಬೆಂಗಳೂರಿನಲ್ಲಿ ಈ ಉತ್ಪನ್ನಗಳು ಕಡಿಮೆ ದರದಲ್ಲಿ ಸಿಗುವಂತೆ ಮಾಡಲಾಗಿದೆ.

ಈ ಯೋಜನೆಯಲ್ಲಿ 34 ರೂ.ಗೆ ಅಕ್ಕಿ, 30 ರೂ.ಗೆ ಗೋಧಿ ಹಿಟ್ಟು, 70 ರೂ.ಗೆ ಕಡಲೆಬೇಳೆ, 107 ರೂ.ಗೆ ಹೆಸರುಬೇಳೆ ಲಭ್ಯವಾಗಲಿದೆ. ಮಾರುಕಟ್ಟೆಯಲ್ಲಿ ಅಕ್ಕಿ 55–60 ರೂ, ಗೋಧಿ 45–50 ರೂ, ಕಡಲೆಬೇಳೆ 90–100 ರೂ, ಹೆಸರುಬೇಳೆ 120–130 ರೂ.ಗೆ ಮಾರಾಟವಾಗುತ್ತಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ