ಜಾರ್ಖಂಡ್ ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಇಂದು ಪ್ರಮಾಣ ವಚನ ಸ್ವೀಕಾರ

02/02/2024

ಜಾರ್ಖಂಡ್ ನಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಪ್ರಮುಖ ವ್ಯಕ್ತಿ ಚಂಪೈ ಸೊರೆನ್ ಇಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ರಾಜ್ಯದಲ್ಲಿ ಸರ್ಕಾರ ಸ್ಥಾಪಿಸಲು ಚಂಪೈ ಸೊರೆನ್ ಅವರನ್ನು ರಾಜಭವನಕ್ಕೆ ಆಹ್ವಾನಿಸಿದ್ದರು.

ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರ ಬೆಂಬಲಿಗ ಚಂಪೈ ಸೊರೆನ್ ಅವರಿಗೆ ಮುಂದಿನ 10 ದಿನಗಳಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಬಹುಮತ ಸಾಬೀತುಪಡಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ.
ಗುರುವಾರ, ಚಂಪೈ ಸೊರೆನ್ ಅವರು 43 ಶಾಸಕರೊಂದಿಗೆ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ಗುರುವಾರ ಸಂಜೆ ರಾಜ್ಯದಲ್ಲಿ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯ ಮಧ್ಯೆ, ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಖಂಡಿಸಲು ಈ ಅವಕಾಶವನ್ನು ಬಳಸಿಕೊಂಡರು, “ಪ್ರತಿ ರಾಜ್ಯದಲ್ಲಿ ಜನಾದೇಶವನ್ನು ಹತ್ತಿಕ್ಕುತ್ತಿದೆ” ಎಂದು ಆರೋಪಿಸಿದ್ದರು.

ಬಿಹಾರದಲ್ಲಿ ಸಮ್ಮಿಶ್ರ ಸರ್ಕಾರ ರಾಜೀನಾಮೆ ನೀಡಿದ ತಕ್ಷಣ, ರಾಜ್ಯಪಾಲರು ಹೊಸ ಸರ್ಕಾರ ರಚಿಸಲು ಆಹ್ವಾನವನ್ನು ಕಳುಹಿಸಿದ್ದರು. ಆದರೆ ಜಾರ್ಖಂಡ್ ನಲ್ಲಿ ಹಕ್ಕು ಸಾಧಿಸಿದ ಒಂದು ದಿನದ ನಂತರವೂ ಸರ್ಕಾರ ರಚಿಸಲು ಆಹ್ವಾನವನ್ನು ಕಳುಹಿಸಲಾಗಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

Exit mobile version