ಜೀವದ ಹಂಗು ತೊರೆದು ರೈಲು ಅವಘಡ ತಪ್ಪಿಸಿದ ಚಂದ್ರಾವತಿ ಅವರಿಗೆ ರೈಲ್ವೆ ಪೊಲೀಸ್ ಅಧಿಕಾರಿಗಳಿಂದ ಸನ್ಮಾನ
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿ ತಕ್ಷಣ ಎಚ್ಚೆತ್ತುಕೊಂಡು ಸಮಯ ಪ್ರಜ್ಞೆಯಿಂದ ಕೆಂಪುಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದ ಮಂಗಳೂರು ನಗರದ ಕುಡುಪು ಸಮೀಪದ ಆಯರಮನೆಯ ಚಂದ್ರಾವತಿ ಅವರನ್ನು ಮಂಗಳೂರು ರೈಲ್ವೆ ಪೊಲೀಸ್ ಅಧಿಕಾರಿಗಳು ಸೆಂಟ್ರಲ್ ನಿಲ್ದಾಣದ ರೈಲ್ವೆ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಿದರು.
ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ ಠಾಣೆಗೆ ಕರೆಸಿ ಸನ್ಮಾನಿಸಿ ಬೀಳ್ಕೊಟ್ಟಿದ್ದಾರೆ. ಈ ಸಂದರ್ಭ ಮಾತನಾಡಿದ ಮಂಗಳೂರು ರೈಲ್ವೆ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಕೊಟ್ಟಾರಿ ‘70ರ ವಯಸ್ಸಿನ ಚಂದ್ರಾವತಿ ಜೀವದ ಹಂಗು ತೊರೆದು ಸಂಭಾವ್ಯ ರೈಲು ದುರ್ಘಟನೆಯನ್ನು ತಪ್ಪಿಸುವ ಮೂಲಕ ಮಾದರಿ ಕಾರ್ಯ ನಡೆಸಿದ್ದಾರೆ. ಚಂದ್ರಾವತಿ ಅವರ ಸಾಧನೆಯನ್ನು ಇಲಾಖೆಯ ಕೇಂದ್ರ ಕಚೇರಿಗೂ ಮಾಹಿತಿ ನೀಡಲಾಗಿದೆ ಎಂದರು.
ರೈಲ್ವೆ ಇಲಾಖೆಯ ಆರ್ ಪಿಎಫ್ ಎಸ್.ದಿಲೀಪ್ ಕುಮಾರ್, ಚಂದ್ರಾವತಿಯ ಪುತ್ರ ನವೀನ್ ಕುಮಾರ್ ಕುಡುಪು, ಸಂಬಂಧಿಕರಾದ ಉದಯ್ ಕುಡುಪು ಮುಂತಾದವರು ಉಪಸ್ಥಿತರಿದ್ದರು.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಮಾರ್ಚ್ 21ರಂದು ಮಧ್ಯಾಹ್ನ ಸುಮಾರು 2:10ಕ್ಕೆ ಪಡೀಲ್–ಜೋಕಟ್ಟೆ ಮಾರ್ಗವಾಗಿ ಮುಂಬೈಗೆ ಚಲಿಸುತ್ತಿದ್ದ ಮತ್ಸ್ಯಗಂಧ ರೈಲು ಸಂಚರಿಸುತ್ತಿದ್ದಾಗ ಪಚ್ಚನಾಡಿ ಸಮೀಪದ ಮಂದಾರದ ಹಳಿಗೆ ಮರ ಬಿದ್ದಿತ್ತು. ಇದನ್ನು ಗಮನಿಸಿದ ಚಂದ್ರಾವತಿ ತಕ್ಷಣ ಮನೆಯಿಂದ ಕೆಂಪುವಸ್ತ್ರವನ್ನು ತಂದು ಪ್ರದರ್ಶಿಸಿದರು. ಅಪಾಯದ ಮುನ್ಸೂಚನೆ ಅರಿತ ಲೋಕೋಪೈಲಟ್ ರೈಲು ನಿಲ್ಲಿಸಿದ್ದರು. ಇದರಿಂದ ರೈಲು ಅವಘಡ ತಪ್ಪಿತ್ತು. ಅಲ್ಲದೆ ಚಂದ್ರಾವತಿಯ ಸಮಯ ಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























