ಮಕ್ಕಳ ಕಳ್ಳರು ಬಂದಿದ್ದಾರೆಂಬ ಸುಳ್ಳು ಸುದ್ದಿ: ಅಕ್ಷಯ್ ಎಂ.ಹಾಕೆ ಸ್ಪಷ್ಟನೆ - Mahanayaka

ಮಕ್ಕಳ ಕಳ್ಳರು ಬಂದಿದ್ದಾರೆಂಬ ಸುಳ್ಳು ಸುದ್ದಿ: ಅಕ್ಷಯ್ ಎಂ.ಹಾಕೆ ಸ್ಪಷ್ಟನೆ

hake akshay macchindra
15/09/2022

ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿ ದ್ದಾರೆಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶ, ರಾಜ್ಯದ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದ್ದಾರೆ.

ತಮ್ಮ ನಗರ, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬೇಕು. ಇದರಿಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕಷವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ