ರೆಸ್ಟೋರೆಂಟ್ ಗಳಲ್ಲಿ ಆಹಾರ ಕಲಬೆರಕೆ ಆರೋಪ: ಖಡಕ್ ಆದೇಶ ಹೊರಡಿಸಿದ ಯುಪಿ ಸಿಎಂ ಯೋಗಿ - Mahanayaka

ರೆಸ್ಟೋರೆಂಟ್ ಗಳಲ್ಲಿ ಆಹಾರ ಕಲಬೆರಕೆ ಆರೋಪ: ಖಡಕ್ ಆದೇಶ ಹೊರಡಿಸಿದ ಯುಪಿ ಸಿಎಂ ಯೋಗಿ

24/09/2024


Provided by

ಹೊಟೇಲ್ ಆಹಾರ ಪದಾರ್ಥಗಳಲ್ಲಿ ಉಗುಳುವುದು ಮತ್ತು ಮೂತ್ರವನ್ನು ಬೆರೆಸುವುದು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ರಾಜ್ಯಾದ್ಯಂತ ಎಲ್ಲಾ ಆಹಾರ ಮಳಿಗೆಗಳಲ್ಲಿ ನಿರ್ವಾಹಕರು, ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರುಗಳು ಮತ್ತು ವಿಳಾಸಗಳನ್ನು ಪ್ರಮುಖವಾಗಿ ಪ್ರದರ್ಶಿಸುವಂತೆ ಆದೇಶಿಸಿದ್ದಾರೆ. ಸಾರ್ವಜನಿಕ ಸುರಕ್ಷತಾ ಕಾಳಜಿಗಳ ನಡುವೆ ಉತ್ತರದಾಯಿತ್ವವನ್ನು ಹೆಚ್ಚಿಸುವ ಗುರಿಯನ್ನು ಈ ನಿರ್ದೇಶನ ಹೊಂದಿದೆ.

ಹೋಟೆಲ್‌ಗಳು, ರೆಸ್ಟೋರೆಂಟ್ ಗಳಲ್ಲಿ ಸಿಸಿಟಿವಿಗಳನ್ನು ಸ್ಥಾಪಿಸುವುದರ ಜೊತೆಗೆ ಬಾಣಸಿಗರು ಮತ್ತು ಪರಿಚಾರಕರು ಮಾಸ್ಕ್ ಮತ್ತು ಕೈಗವಸುಗಳನ್ನು ಧರಿಸುವುದು ಕಡ್ಡಾಯ ಎಂದು ಈ ಆದೇಶದಲ್ಲಿ ಹೇಳಲಾಗಿದೆ.

ಇನ್ನು ಈ ಕುರಿತು ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಹಾರದಲ್ಲಿ ಮಾನವ ತ್ಯಾಜ್ಯದ ಉಪಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನು ‘ಅಸಹ್ಯಕರ’ ಎಂದು ಕರೆದರು. ಇಂತಹ ವಸ್ತುಗಳಿಂದ ಆಹಾರವನ್ನು ಕಲುಷಿತಗೊಳಿಸುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ