ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ ನಿಧನ - Mahanayaka
11:08 AM Saturday 12 - September 2026

ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ ನಿಧನ

bank janardhan passes away
14/04/2025

ಬೆಂಗಳೂರು: 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ.

ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3:4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಜನಾರ್ದನ್ ಮಿಂಚಿದ್ರು. 80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್‌ ಉಪೇಂದ್ರ ನಿರ್ದೇಶನದ ಶ್ ಸಿನಿಮಾ, ತರ್ಲೆ ನಾನ್ ಮಗ , ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ, ಗೌರವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯಾಂಕ್ ಜ​ನಾರ್ಧನ್ ಗಮನ ಸೆಳೆದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler