10:56 PM Tuesday 27 - January 2026

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಮುಸ್ಲಿಮರೇ ತುಂಬಿಕೊಳ್ಳುತ್ತಾರಂತೆ: ವಿವಾದ ಸೃಷ್ಟಿಸಿದ ಪ್ರಧಾನಿ ಮೋದಿ ದ್ವೇಷದ ಹೇಳಿಕೆ

08/05/2024

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಮುಸ್ಲಿಮರೇ ತುಂಬಿಕೊಳ್ಳುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಮೂಲಕ ದ್ವೇಷ ಭಾಷಣದ ಸರಣಿಯನ್ನು ಮುಂದುವರಿಸಿದ್ದಾರೆ.

ಕಾಂಗ್ರೆಸ್ ಇಂದು ಮಹಿಳೆಯರ ಮಾಂಗಲ್ಯ ಕಿತ್ತುಕೊಳ್ಳುತ್ತದೆ, ಎಸ್ಸಿ ಎಸ್ಟಿ ಒಬಿಸಿ ಗಳ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡುತ್ತದೆ, ದೇಶದ ಸಂಪತ್ತನ್ನು ನುಸುಲುಕೋರರಿಗೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ದ್ವೇಷಣ ಭಾಷಣ ಮಾಡಿದ್ದರು.
ಇದೀಗ ಮಧ್ಯಪ್ರದೇಶದ ದಾರ್ ನಲ್ಲಿ ಅವರು ಮಾತಾಡಿದ್ದು ಅಲ್ಪಸಂಖ್ಯಾತರಿಗೆ ಕ್ರೀಡೆಯಲ್ಲಿಯೂ ಮೀಸಲಾತಿ ನೀಡುವುದು ಕಾಂಗ್ರೆಸ್ಸಿನ ಉದ್ದೇಶವಾಗಿದೆ, ಇದರರ್ಥ ಧರ್ಮದ ಆಧಾರದ ಮೇಲೆ ಯಾರು ಕ್ರಿಕೆಟ್ ತಂಡದಲ್ಲಿ ಇರಬೇಕು ಮತ್ತು ಹೊರಗೆ ಹೋಗಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದವರು ಹೇಳಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version