ಕೊರೊನ ಅಬ್ಬರ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಆದೇಶಿಸಿದ್ದಾರೆ.
ಆರೋಗ್ಯ ಇಲಾಖೆಯ ಮಾರ್ಗಸೂಚಿ:
* ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. * ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು. * ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. * ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. * ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD